Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ವಸತಿ ಶಾಲೆಯಲ್ಲಿ ಸಿಬಿಎಸ್‌ಇ ಕಾರ್ಯಾಗಾರ

ಮಂಗಳೂರು : ಸಿಬಿಎಸ್‌ಎ ಸಿಇಒ ಬೆಂಗಳೂರು ಹಾಗೂ ಶಕ್ತಿ ವಸತಿ ಶಾಲೆಯ ಜಂಟಿ ಆಶ್ರಯದಲ್ಲಿ ಸಮಾಜಶಾಸ್ತ್ರದ ಸಾಮರ್ಥ್ಯ ಆಧಾರಿತ ಮೌಲ್ಯಮಾಪನ ವಿಷಯದ ಕುರಿತು 2 ದಿನಗಳ ಸಿಬಿಎಸ್‌ಇ ಅಧ್ಯಾಪಕರಿಗೆ ಕಾರ್ಯಾಗಾರವು ಇಂದು ಉದ್ಘಾಟನೆಗೊಂಡಿತು.

ಉದ್ಘಾಟನೆಯನ್ನು ಕಾರ್ಯಗಾರದ ಸಂಪನ್ಮೂಲ ವ್ಯಕ್ತಿ ಶ್ರೀ ರವಿಶಂಕರ್ ವಿದ್ಯಾ ಮಂದಿರದ ಮಂಗಳೂರಿನ ಪ್ರಾಂಶುಪಾಲರಾದ ಶ್ರೀ ಸುರೇಶ ಮಹಾಲಿಂಗಪುರ್ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಡೆಲ್ಲಿ ಪಬ್ಲಿಕ್ ಸ್ಕೂಲ್ ಮಂಗಳೂರಿನ ಪ್ರಾಂಶುಪಾಲರಾದ ಶ್ರೀಮತಿ ಶೀಲ ಬಾಲಮುರಳಿ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತ ಸೂರಜ್ ಉಪಸ್ಥಿತರಿದ್ದರು. ಈ ಕಾರ್ಯಗಾರವು ಇಂದು ಮತ್ತು ನಾಳೆ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮ ಮೆಮೊರಿಯಲ್ ಸಭಾಂಗಣದಲ್ಲಿ ನಡೆಯಲಿದೆ.

ಈ ಕಾರ್ಯಗಾರದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವಿವಿಧ ಸಿಬಿಎಸ್‌ಇ ಶಾಲೆಗಳಿಂದ 60 ಶಿಕ್ಷಕರು ಭಾಗವಹಿಸಿರುತ್ತಾರೆ. ಕಾರ್ಯಕ್ರಮದ ನಿರೂಪಣೆಯನ್ನು ಸ್ಮಿಶಾ ವಿನಿಲ್ ನಡೆಸಿಕೊಟ್ಟರು.