ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಸಂಪನ್ಮೂಲ ವ್ಯಕ್ತಿಗಳಿಗಾಗಿ ತರಬೇತಿ ಕಾರ್ಯಾಗಾರವು ಉದ್ಘಾಟನೆಗೊಂಡಿತು.
ಸಿ.ಬಿ.ಎಸ್.ಇ ಬೋರ್ಡ್ ಮತ್ತು ಇನ್ಸ್ಟಿಟ್ಯೂಟ್ ಆಫ್ ಸೆಕ್ರೆಟರಿಯಟ್ ಟ್ರೇನಿಂಗ್ ಮ್ಯಾನೇಜ್ಮೆಂಟ್ ದೆಹಲಿ ಮತ್ತು ಶಕ್ತಿ ವಿದ್ಯಾ ಸಂಸ್ಥೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಕಾರ್ಯಾಗಾರದಲ್ಲಿ ವಿವಿಧ ಜಿಲ್ಲೆಗಳಿಂದ ಸುಮಾರು 55 ಕ್ಕೂ ಹೆಚ್ಚು ಶಿಕ್ಷಕರು ಮತ್ತು ಶಾಲಾ ಪ್ರಾಂಶುಪಾಲರು ಭಾಗವಹಿಸಿದ್ದರು.
ದೀಪವನ್ನು ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿ ನಂತರ ಮಾತನಾಡಿದ ಇನ್ಸ್ಟಿಟ್ಯೂಟ್ ಆಫ್ ಸೆಕ್ರೆಟರಿಯಟ್ ಟ್ರೇನಿಂಗ್ ಮ್ಯಾನೇಜ್ಮೆಂಟ್ ದೆಹಲಿ ಇದರ ಡೆಪ್ಯೂಟಿ ಡೈರೆಕ್ಟರ್ ಆಗಿರುವ ಪುನೀತ್ ಕುಮಾರ್ ಶರ್ಮಶಿಕ್ಷಕರು, ಮಾರ್ಗದರ್ಶಕರು ಭವಿಷ್ಯದಲ್ಲಿ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ, ಸದೃಢ ದೇಶವನ್ನು ಕಟ್ಟಲು ಶಿಕ್ಷಕರ ಪಾತ್ರ ಬಹಳ ದೊಡ್ಡದು, ಹಾಗಾಗಿ 2 ದಿನಗಳ ಕಾರ್ಯಾಗಾರದಲ್ಲಿ ಶಿಕ್ಷಕರು ಉತ್ತಮವಾದ ಮಾಹಿತಿಗಳನ್ನು ಕಲಿತು ಸಂಪನ್ಮೂಲ ವ್ಯಕ್ತಿಗಳಾಗಿ ಮಕ್ಕಳಿಲ್ಲಿರುವ ಭಯ ಮತ್ತು ಕೀಳರಿಮೆಯನ್ನು ಹೋಗಲಾಡಿಸಿ ಉತ್ತಮವಾದ ಭಾಂಧವ್ಯವನ್ನು ರೂಪಿಸುವಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳುತ್ತಾ ಆಗಮಿಸಿದ ಎಲ್ಲ ಶಿಕ್ಷಕರಿಗೂ ಶುಭ ಹಾರೈಸಿದರು.
ಈ ಎರಡು ದಿನಗಳ ಕಾರ್ಯಾಗಾರದಲ್ಲಿ ಶಿಕ್ಷಕರು ಕಲಿಕೆ, ತರಬೇತಿ, ಪಾಠ ಯೋಜನೆ, ಪೂರ್ವ ತಯಾರಿ, ಅನುಷ್ಠಾನ ಮತ್ತು ಎನ್.ಇ.ಪಿ(NEP) 2020 ರ ಉದ್ದೇಶ ಮತ್ತು ಅದರ ಸ್ವರೂಪದ ಕುರಿತು ತಿಳಿದುಕೊಂಡರು. ಸಮಾರೋಪ ಸಮಾರಂಭದಲ್ಲಿ ಈ ಕಾರ್ಯಾಗಾರದ ತರಬೇತುದಾರರಾದ ಐ.ಎಸ್.ಟಿ.ಎಂ ಇದರ ಡೈರೆಕ್ಟರ್ ಪುನೀತ್ ಕುಮಾರ್ ಶರ್ಮ, ಸುರೇಶ್ ಸಿ.ಬಿ.ಎಸ್.ಇ ಜಿಲ್ಲಾ ತರಬೇತಿ ಸಂಘಟಕರು ಇವರಿಗೆ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್ ಅವರು ಸನ್ಮಾನಿಸಿದರು.
ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ಕೆ. ಸಿ. ನಾೖಕ್, ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್ ಮತ್ತು ಸುರೇಶ್ ಸಿ.ಬಿ.ಎಸ್.ಇ ಜಿಲ್ಲಾ ತರಬೇತಿ ಸಂಘಟಕರು ದಕ್ಷಿಣ ಕನ್ನಡ ಜಿಲ್ಲೆ ಮತ್ತಿತರು ಉಪಸ್ಥಿತಿರಿದ್ದರು.
ಈ ಸಂಧರ್ಭದಲ್ಲಿ ಶಾಲಾ ಪ್ರಾಂಶುಪಾಲೆ ಬಬಿತಾ ಸೂರಜ್ ಸ್ವಾಗತಿಸಿದರು. ಚೇತನಾ ನಿರೂಪಿಸಿ ವಂದಿಸಿದರು.